Tue. Jul 22nd, 2025

ರಾಜ್ಯಕ್ಕೆ ಹೊಸದಾಗಿ 2000 ಬಸ್‌ಗಳು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ

ರಾಜ್ಯಕ್ಕೆ ಹೊಸದಾಗಿ 2000 ಬಸ್‌ಗಳು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ

ಯಾದಗಿರಿ, ಏಪ್ರಿಲ್ 9:-

ಸಾರ್ವಜನಿಕರ ಹೆಚ್ಚುತ್ತಿರುವ ಜನದಟ್ಟಣೆ ಹಾಗೂ ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರ ಹೆಚ್ಚುತ್ತಿರುವ ಪ್ರಯಾಣದ ಹೊರೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸದಾಗಿ ಎರಡು ಸಾವಿರ ಬಸ್‌ಗಳ ಖರೀದಿಗೆ ಮುಂದಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಮಾಧ್ವಾರ್ ಗ್ರಾಮದಲ್ಲಿ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, “ಬಸ್‌ಗಳಲ್ಲಿ ಜನದಟ್ಟಣೆ ಗರಿಷ್ಠ ಮಟ್ಟ ತಲುಪುತ್ತಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ಹೊಸದಾಗಿ 2000 ಬಸ್‌ಗಳನ್ನು ಖರೀದಿಸಲಾಗುವುದು. ಇದರಲ್ಲಿ 600 ರಿಂದ 700 ಬಸ್‌ಗಳನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಲಾಗುತ್ತದೆ,” ಎಂದು ಹೇಳಿದರು.

ಸಂಪತ್ತಿಗೆ ಹೊಸ ಶಕ್ತಿ
ಸಾರಿಗೆ ನಿಗಮದಲ್ಲಿ ಸಿಬ್ಬಂದಿಗಳ ಕೊರತೆಯ ಹಿನ್ನೆಲೆಯಲ್ಲಿ 10,000 ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭವಾಗಲಿದೆ. ಈ ಪೈಕಿ 1000 ಹುದ್ದೆಗಳನ್ನು ಅನುಕಂಪ ಆಧಾರಿತ ನೇಮಕಾತಿ ಮೂಲಕ ಹಾಗೂ 9000 ಬಸ್ ಚಾಲಕರ ಮತ್ತು ನಿರ್ವಾಹಕರ ನೇಮಕಾತಿಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕ ತಕ್ಷಣ ನೇಮಕಾತಿ ಪ್ರಕ್ರಿಯೆ ಜಾರಿಗೊಳ್ಳಲಿದೆ ಎಂದು ಸಚಿವರು ವಿವರಿಸಿದರು.

ಸೈದಾಪುರಕ್ಕೆ ಹೈಟೆಕ್ ಬಸ್ ನಿಲ್ದಾಣ
ಸೈದಾಪುರದಲ್ಲಿ ಕೈಗಾರಿಕಾ ಚಟುವಟಿಕೆಗಳು ವೇಗವಾಗಿ ನಡೆಯುತ್ತಿದ್ದು, ಬಸ್ ನಿಲ್ದಾಣದ ಅವಶ್ಯಕತೆ ಇದ್ದು, ಸಂಸದರ ನಿಧಿ ಹಾಗೂ ಶಾಸಕರ ನಿಧಿಯಿಂದ ತಲಾ ₹2.5 ಕೋಟಿ ವೆಚ್ಚದಲ್ಲಿ ₹5 ಕೋಟಿ ಮೊತ್ತದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದು ಹೇಳಿದರು.

ನಾಮಕರಣದ ಪ್ರಸ್ತಾವನೆಗಳು
ಸಾರಿಗೆ ಸಚಿವರು ಮಾತನಾಡುತ್ತಾ, ಯಾದಗಿರಿ ಕೇಂದ್ರ ಬಸ್ ನಿಲ್ದಾಣಕ್ಕೆ ಮೈಲಾರ ಮಲ್ಲಯ್ಯನ, ಹಾಗೂ ಗುರುಮಠಕಲ್ ಬಸ್ ನಿಲ್ದಾಣಕ್ಕೆ ಖಾಸಾಮಠದ ನಾಮಕರಣ ಮಾಡುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ವರದಿ ಪಡೆಯಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಲಬುರ್ಗಿ ಸಂಸದ ಡಾ. ರಾಧಾಕೃಷ್ಣ ದೊಡಮನಿ, ಶಾಸಕ ಶರಣಗೌಡ ಕಂದಕೂರ್, ಸಾರಿಗೆ ನಿಗಮ ಎಮ್. ರಾಚಪ್ಪ, ಗ್ರಾಮ ಪಂಚಾಯತ್ ಅಧ್ಯಕ್ಷ ಶಂಕ್ರಪ್ಪ, ಹಾಗೂ ಇತರರು ಭಾಗವಹಿಸಿದರು.

Whatsapp Group Join
facebook Group Join

Related Post

Leave a Reply

Your email address will not be published. Required fields are marked *

error: Content is protected !!