ಹುಬ್ಬಳ್ಳಿ ಆ ೦೭:- ಡಕಾಯಿತಿ ಗ್ಯಾಂಗ್ ಸದಸ್ಯನ ಮೇಲೆ ಗೋಕುಲ ರೋಡ್ ಪೊಲೀಸರು (Gokul Road Police
ಮಹೇಶ್ ಮತ್ತು ಈತನ ಗ್ಯಾಂಗ್ ಹುಬ್ಬಳ್ಳಿಯ ವಿವಿಧ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದಾಗ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರ ಬಲೆಗೆ ಸಿಕ್ಕಿದ್ದ ಮಹೇಶ್ ಪರಾರಿಯಾಗಿದ್ದ ತನ್ನ ಗ್ಯಾಂಗ್ನವರಿರುವ ಸ್ಥಳವನ್ನು ತೋರಿಸುತ್ತೇನೆ ಎಂದು ಹೇಳಿ ಪೊಲೀಸರನ್ನು ಕರೆದುಕೊಂಡು ಹೋಗಿದ.
ಆದರೆ, ಎಚ್ಚರಿಕೆಯಿಂದ ಸ್ಥಳಕ್ಕೆ ಹೋದ ನಂತರ, ಆಕಸ್ಮಿಕವಾಗಿ ಮಹೇಶ್ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದಾನೆ. ಸನ್ನಿವೇಶ ತೀವ್ರ ತಿರುವು ಪಡೆದುಕೊಂಡಿದ್ದು, ಪ್ರಾಣರಕ್ಷಣೆಗಾಗಿ ಗೋಕುಲ ರೋಡ್ ಪೊಲೀಸ್ ಠಾಣೆಯ ಪಿಎಸ್ಐ ಸಚಿನ್ ದಾಸರೆಡ್ಡಿ ಈತನ ಕಾಲಿಗೆ ಗುಂಡು ಹಾರಿಸಿದ್ದಾರೆ.
ಗುಂಡಿನಿಂದ ಗಾಯಗೊಂಡು ನೋವಿನಿಂದ ಒದ್ದಾಡುತ್ತಿದ್ದ ಮಹೇಶ್ನನ್ನು ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಲ್ಲಿ ಗೋಕುಲ ರೋಡ್ ಪೊಲೀಸ್ ಠಾಣೆಯ ಪಿಎಸ್ಐ ಸಚಿನ್ ದಾಸರೆಡ್ಡಿ ಮತ್ತು ಪೇದೆ ವಸಂತ ಗುಡಿಗೇರಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಗೋಕುಲ ರೋಡ್ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕರಣದ ಬಗ್ಗೆ ತನಿಖೆ ಮುಂದುವರಿಸುತ್ತಿದ್ದಾರೆ, ಮತ್ತು ಉಳಿದಿರುವ ಡಕಾಯಿತರನ್ನು ಬಂಧಿಸುವ ಕಾರ್ಯ ತೀವ್ರಗೊಳಿಸಲಾಗಿದೆ.
- ಯಾದಗಿರಿ ಎಸ್ಎಸ್ಎಲ್ಸಿ ಫಲಿತಾಂಶ ಮತ್ತೆ ಕೊನೆ ಸ್ಥಾನ: ಶಿಕ್ಷಕರಿಗೆ ನೋಟಿಸ್
- ಪತ್ನಿಯೇ ನದಿಗೆ ತಳ್ಳಿದ್ದಾಳೆಂದು ಆರೋಪಿಸಿದ್ದ ತಾತಪ್ಪನಿಗೆ ಮತ್ತೊಂದು ಶಾಕ್: ಬಾಲ್ಯವಿವಾಹ ಆರೋಪದಲ್ಲಿ ಸಂಕಷ್ಟ
- ಕೋಟ್ಯಾಂತರ ರೂ. ಖರ್ಚಾದರೂ ಕ್ರೀಡಾಂಗಣ ದರಿದ್ರಾವಸ್ಥೆ: ಯಾದಗಿರಿಯಲ್ಲಿ ಅನುದಾನ ಲೂಟಿ ಆರೋಪ!
- ಹೋನಗೇರಾ ಶಾಲೆಯ ದುಸ್ಥಿತಿ: ಶಿಥಿಲ ಕಟ್ಟಡ, ಸೌಲಭ್ಯಗಳ ಕೊರತೆ ನಡುವೆ ಜೀವ ಭಯದಲ್ಲಿ ನೂರಾರು ಮಕ್ಕಳ ಶಿಕ್ಷಣ
- ನದಿಗೆ ತಳ್ಳಿದ ಪ್ರಕರಣಕ್ಕೆ ಹೊಸ ತಿರುವು – ಪತಿ-ಪತ್ನಿ ಸಂಬಂಧಕ್ಕೆ ವಿಚ್ಛೇದನ ಅಂತ್ಯ