ಯಾದಗಿರಿ ಅ ೨೯:-
2020ರಲ್ಲಿ ಏಕಕಾಲಕ್ಕೆ ನೂರಾರು ರೈತರ ಭೂಮಿಯನ್ನು ಪಹಣಿ ದಾಖಲೆಗಳ 11ನೇ ಕಾಲಂನಲ್ಲಿ ವಕ್ಫ್ ಬೋರ್ಡ್ಗೆ ಸೇರಿಸಲಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಗರ ಮತ್ತು ಕೊಂಗಂಡಿ ಗ್ರಾಮಗಳ ಮಧ್ಯೆ ಹಾದು ಹೋಗುತ್ತಿರುವ ರೈಲ್ವೆ ಟ್ರ್ಯಾಕ್ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಕಾಮಗಾರಿ ನಿರ್ಮಾಣಕ್ಕೆ ರೈತರ ಭೂಮಿಯನ್ನು ಭೂಸ್ವಾದೀನ ಮಾಡುವ ಸಂದರ್ಭದಲ್ಲಿ ವಕ್ಫ್ ಬೋರ್ಡ್ ಹೆಸರು ಬಳಕೆಯಾಗಿ, ರೈತರಿಗೆ ಪರಿಹಾರದ ಹಣ ಕೂಡ ಸಿಗದೆ ನಿಂತಿದೆ.
ಈ ಸಂಬಂಧ ಪರಿಹಾರಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಂದ ಪಹಣಿ ದಾಖಲೆಯನ್ನು ಪಡೆಯಲು ರೈತರು ಹೋರಾಟ ನಡೆಸಿದಾಗ, ಪಹಣಿಯ 11ನೇ ಕಾಲಂನಲ್ಲಿ ವಕ್ಫ್ ಹೆಸರು ಕಂಡು ಬಂತು. ಇದರಿಂದ ಆತಂಕಕ್ಕೆ ಒಳಗಾದ ರೈತರು ತಕ್ಷಣವೇ ಕಾನೂನು ಮೆಟ್ಟಿಲುಹಾಕಿದ್ದು, ಕಳೆದ ಎರಡು ವರ್ಷಗಳಿಂದ ತಮ್ಮ ಹಕ್ಕಿನ ಭೂಮಿಯನ್ನು ವಕ್ಫ್ ಬೋರ್ಡ್ ಆಸ್ತಿಯಿಂದ ತೆಗೆಸಿಕೊಳ್ಳಲು ಕೋರ್ಟ್ ಮೆಟ್ಟಿಲು ತುಳಿಯುತ್ತಿದ್ದಾರೆ.
ಯಾದಗಿರಿ ಜಿಲ್ಲೆಯಲ್ಲಿ ಸುಮಾರು 1440ಕ್ಕೂ ಹೆಚ್ಚು ಜಮೀನನ್ನು ವಕ್ಫ್ ಆಸ್ತಿಯೆಂದು ಗುರುತಿಸಲಾಗಿದೆ ಎಂದು ರೈತ ಮುಖಂಡ ಲಕ್ಷ್ಮಿಕಾಂತ ಪಾಟೀಲ ಅವರು ಗಂಭೀರ ಆರೋಪ ಮಾಡಿದ್ದು, “ನಮ್ಮ ಭೂಮಿಯನ್ನು ನಮಗೆ ಹಿಂದಿರುಗಿಸದಿದ್ದರೆ ನಿರ್ದಾಕ್ಷಿಣ್ಯ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ.
- ಯಾದಗಿರಿ ಎಸ್ಎಸ್ಎಲ್ಸಿ ಫಲಿತಾಂಶ ಮತ್ತೆ ಕೊನೆ ಸ್ಥಾನ: ಶಿಕ್ಷಕರಿಗೆ ನೋಟಿಸ್
- ಪತ್ನಿಯೇ ನದಿಗೆ ತಳ್ಳಿದ್ದಾಳೆಂದು ಆರೋಪಿಸಿದ್ದ ತಾತಪ್ಪನಿಗೆ ಮತ್ತೊಂದು ಶಾಕ್: ಬಾಲ್ಯವಿವಾಹ ಆರೋಪದಲ್ಲಿ ಸಂಕಷ್ಟ
- ಕೋಟ್ಯಾಂತರ ರೂ. ಖರ್ಚಾದರೂ ಕ್ರೀಡಾಂಗಣ ದರಿದ್ರಾವಸ್ಥೆ: ಯಾದಗಿರಿಯಲ್ಲಿ ಅನುದಾನ ಲೂಟಿ ಆರೋಪ!
- ಹೋನಗೇರಾ ಶಾಲೆಯ ದುಸ್ಥಿತಿ: ಶಿಥಿಲ ಕಟ್ಟಡ, ಸೌಲಭ್ಯಗಳ ಕೊರತೆ ನಡುವೆ ಜೀವ ಭಯದಲ್ಲಿ ನೂರಾರು ಮಕ್ಕಳ ಶಿಕ್ಷಣ
- ನದಿಗೆ ತಳ್ಳಿದ ಪ್ರಕರಣಕ್ಕೆ ಹೊಸ ತಿರುವು – ಪತಿ-ಪತ್ನಿ ಸಂಬಂಧಕ್ಕೆ ವಿಚ್ಛೇದನ ಅಂತ್ಯ