ಯಾದಗಿರಿ, ಏಪ್ರಿಲ್ 05: –
ಜಿಲ್ಲೆಯಲ್ಲಿ ಈ ಬಾರಿ 3,917 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಅವರಿಗಾಗಿ ಯಾದಗಿರಿ ನಗರದಲ್ಲಿ ಒಟ್ಟು 9 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಕೇಂದ್ರದಲ್ಲೂ ನಿಗದಿತ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುತ್ತಿದ್ದು, ಯಾವುದೇ ರೀತಿಯ ನಕಲು ಅಥವಾ ಅಕ್ರಮ ನಡೆಯದಂತೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲಾಗಿದೆ.
ಪರೀಕ್ಷಾ ಕೇಂದ್ರಗಳ ಭದ್ರತೆ ಗಟ್ಟಿ:
ಜಿಲ್ಲಾ ಆಡಳಿತದಿಂದ ಪ್ರತಿ ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರು, ರೂಟ್ ಅಧಿಕಾರಿಗಳು ಮತ್ತು ರಹಸ್ಯ ಪತ್ರಿಕೆ ಸಾಗಣೆ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಅಭ್ಯರ್ಥಿಗಳ ಪ್ರವೇಶ ಪತ್ರ ಹಾಗೂ ಗುರುತಿನ ಚೀಟಿಗಳನ್ನು ಪರಿಶೀಲನೆ ಮಾಡುವ ಜವಾಬ್ದಾರಿ ಕೋಣೆಯ ಮೇಲ್ವಿಚಾರಕರ ಮೇಲಿದೆ. ನಕಲು ಪ್ರಕರಣಗಳು ನಡೆದರೆ ಅದರ ಹೊಣೆ ಹೊರುವವರು ಮೇಲ್ವಿಚಾರಕರೇ ಆಗಿರುವುದರಿಂದ ಅವರು ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂದು ಡಿಸಿ ಸೂಚಿಸಿದರು.
ಮೂಲಸೌಕರ್ಯ ಮತ್ತು ಭದ್ರತಾ ಕ್ರಮ:
ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯುತ್, ಕುಡಿಯುವ ನೀರು, ಶೌಚಾಲಯದ ಸೌಲಭ್ಯ ಇದ್ದೇ ಇರುತ್ತದೆ ಎಂದು ಕೇಂದ್ರದ ಮುಖ್ಯಸ್ಥರು ಖಚಿತಪಡಿಸಿಕೊಳ್ಳಬೇಕು. ಅಲ್ಲದೆ, ಪ್ರತಿ ಕೇಂದ್ರದ ಮುಖ್ಯ ಪ್ರವೇಶದ್ವಾರದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವಂತೆ ಸ್ಥಳೀಯ ಠಾಣೆಗಳಿಗೆ ಸೂಚನೆ ನೀಡಲಾಗಿದೆ.
ಎಲೆಕ್ಟ್ರಾನಿಕ್ ಸಾಧನಗಳ ನಿಷೇಧ:
ಪರೀಕ್ಷೆಯ ದಿನಗಳಲ್ಲಿ ಮೊಬೈಲ್, ಪೆನ್ಡ್ರೈವ್, ಇಯರ್ಫೋನ್, ಬ್ಲೂಟೂತ್, ಮೈಕ್ರೋಫೋನ್, ಸ್ಮಾರ್ಟ್ವಾಚ್ ಸೇರಿದಂತೆ ಎಲ್ಲ ಎಲೆಕ್ಟ್ರಾನಿಕ್ ಸಾಧನಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯೂ ಜಾರಿಯಲ್ಲಿರಲಿದೆ.
ಸಭೆಯಲ್ಲಿ ಪಾಲ್ಗೊಂಡವರು:
ಶಾಲಾ ಶಿಕ್ಷಣ ಉಪನಿರ್ದೇಶಕ ಚೆನ್ನಬಸಪ್ಪ ಕುಳಗೇರಿ, ಜಿಲ್ಲಾ ಖಜಾನೆ ಉಪನಿರ್ದೇಶಕ ಮಾಳಿಂಗರಾಯ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ್ ಸೇರಿದಂತೆ ವಿವಿಧ ಇಲಾಖೆಗಳ ತಹಶೀಲ್ದಾರರು, ಬಿಇಓಗಳು ಮತ್ತು ಕಾಲೇಜು ಪ್ರಾಂಶುಪಾಲರು ಸಭೆಯಲ್ಲಿ ಹಾಜರಿದ್ದರು.