ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಇಡೀ ಕರ್ನಾಟಕ ಬಂದ್ ನಡೆಸಲು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನಿರ್ಧರಿಸಿದ್ದು, ಬಂದ್ ದಿನಾಂಕವನ್ನು ಸೋಮವಾರ ಘೋಷಿಸುವುದಾಗಿ ಹೇಳಿದ್ದಾರೆ. 26 ರಂದು ಬೆಂಗಳೂರು ಬಂದ್ ಮಾಡುವುದಕ್ಕೆ ನನ್ನದೇನೂ ಅಭ್ಯಂತರವಿಲ್ಲ. ಆದರೆ ಎಲ್ಲರೂ ಒಟ್ಟು ಸೇರಿ ಇಡೀ ರಾಜ್ಯಾದ್ಯಂತ ಬಂದ್ ಮಾಡಿದರೆ ಹೋರಾಟಕ್ಕೊಂಡು ಶಕ್ತಿ ಬರುತ್ತದೆ. ಹೀಗಾಗಿ ಅವರ ಜೊತೆ ಮಾತನಾಡಿ ಕರ್ನಾಟಕ ಬಂದ್ ಡೇಟ್ ಅನೌನ್ಸ್ ಮಾಡುವುದಾಗಿ ತಿಳಿಸಿದ್ದಾರೆ.