BJP-JDS ಮೈತ್ರಿಯಿಂದಾಗಿ JDS ರಾಜ್ಯಾಧ್ಯಕ್ಷ C.M. ಇಬ್ರಾಹಿಂ ತಮ್ಮ ಅಸಮಾಧಾನ ಹೊರಹಾಕಿದ್ದರು. ಇದಕ್ಕೆ ಸಂಬಂಧಿಸಿ ಗೃಹ ಸಚಿವ ಡಾ.G. ಪರಮೇಶ್ವರ್ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಇಬ್ರಾಹಿಂ ಕಾಂಗ್ರೆಸ್ಗೆ ಮರಳಿ ಬರುವುದಾದರೆ ಬರಲಿ, ನಮ್ಮ ವಿರೋಧವಿಲ್ಲ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಬರ್ತೇನೆ, ಮೊದಲಿನಂತೆ ಕಾಂಗ್ರೆಸ್ನಲ್ಲಿ ಕೆಲಸ ಮಾಡೇನೆ ಎಂದರೆ, ಹೈಕಮಾಂಡ್ ಒಂದು ಅವಕಾಶ ಕೊಡಬಹುದು ಎಂದು ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ ಜತೆಗಿನ ಜೆಡಿಎಸ್ ಮೈತ್ರಿ ಬಗ್ಗೆ ನಿನ್ನೆ ಮಾತನಾಡಿದ್ದ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ವರಿಷ್ಠ ಹೆಚ್.ಡಿ.ದೇವೇಗೌಡರು ಇಬ್ರಾಹಿಂಗೆ ಫೋನಾಯಿಸಿ ಮನವೊಲಿಸಲು ಯತ್ನಿಸಿದ್ದಾರೆ. ಅಲ್ಲದೆ ಹೆಚ್.ಡಿ.ಕುಮಾರಸ್ವಾಮಿ ಅವರ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ನಡೆಯುವ ಸಭೆಗೆ ಆಗಮಿಸುವಂತೆ ಸೂಚಿಸಿದ್ದಾರೆ. ಈ ವೇಳೆ ಇಬ್ರಾಹಿಂ ನಾನು ಮುಂದಿನ ದಿನಗಳಲ್ಲಿ ಪ್ರತ್ಯೇಕವಾಗಿ ಮಾತನಾಡುತ್ತೇನೆಂದು ತಿಳಿಸಿದ್ದಾರೆ ಎನ್ನಲಾಗಿದೆ.

