Wed. Feb 11th, 2026

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನ: ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಣೆ

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನ: ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಣೆ

ಬೆಂಗಳೂರು ಡಿ ೧೦:-ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ವಿದೇಶಾಂಗ ಸಚಿವರಾದ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ಸರ್ಕಾರದಿಂದ ಮೂರು ದಿನಗಳ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಶ್ರದ್ಧಾಂಜಲಿ ಸೂಚಕವಾಗಿ ಬುದ್ಧವಾರ ರಾಜ್ಯಾದ್ಯಂತ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಹಾಗೂ ಅನುದಾನಿತ ವಿದ್ಯಾಸಂಸ್ಥೆಗಳಿಗೆ ಈ ರಜೆಯು ಅನ್ವಯವಾಗುತ್ತದೆ.

ರಾಜ್ಯದ ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲು ಆದೇಶಿಸಲಾಗಿದ್ದು, ಶೋಕಾಚರಣೆ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಕೃಷ್ಣ ಅವರ ಅಂತ್ಯಕ್ರಿಯೆ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ 4 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ರಾತ್ರಿ 8 ಗಂಟೆಯವರೆಗೆ ಹಾಗೂ ನಾಳೆ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮದ್ದೂರಿನಲ್ಲಿ ಸಾರ್ವಜನಿಕರಿಗೆ ದಿವಂಗತರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಜನತೆ ಅವರಿಗೆ ಅಂತಿಮ ನಮನ ಸಲ್ಲಿಸಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.

ಇದೇ ವೇಳೆ, ಚಳಿಗಾಲದ ಅಧಿವೇಶನದ ಕಾಲಾವಧಿಯ ಪ್ರಶ್ನೆ ಉದ್ಭವಿಸಿದೆ. ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುವ ಬಿಎಸಿ ಸಭೆಯಲ್ಲಿ ಸಭೆ ಮುಂದುವರಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. ಸಭೆಯಲ್ಲಿ ಮೊದಲಿಗೆ ದಿವಂಗತ ಮಾಜಿ ಸಿಎಂ ಕೃಷ್ಣ ಅವರಿಗೆ ಶಾಸಕರ ಶ್ರದ್ಧಾಂಜಲಿ ಅರ್ಪಿಸಿ ಕಲಾಪವನ್ನು ಮುಂದೂಡುವ ಸಾಧ್ಯತೆ ಇದೆ.

ರಾಜ್ಯ ರಾಜಕಾರಣದಲ್ಲಿ ವಿಶಿಷ್ಟ ಛಾಪು:
ಎಸ್.ಎಂ. ಕೃಷ್ಣ, ಅವರು ಕರ್ನಾಟಕದ ರಾಜಕೀಯ ಮತ್ತು ಆಡಳಿತಾತ್ಮಕ ವಲಯದಲ್ಲಿ ಅಪಾರ ಹೆಸರು ಗಳಿಸಿದ್ದರು. ಮುಖ್ಯಮಂತ್ರಿಯಾಗಿ ಅವರು ಸುಧಾರಿತ ಬಾಂಗ್ಲೂರನ್ನು ನಿರ್ಮಾಣ ಮಾಡಿ ರಾಜ್ಯದ ಆರ್ಥಿಕತೆಯನ್ನು ಹೆಜ್ಜೆಮುಂದೆ ಇರಿಸಿದರು. ಕೇಂದ್ರ ವಿದೇಶಾಂಗ ಸಚಿವರಾಗಿ ದೇಶದ ಹೆಮ್ಮೆಯ ನಿಲುವುಗಳನ್ನು ವಿಶ್ವದ ಮುಂಚೆ ಶಕ್ತಿಯುತವಾಗಿ ಪ್ರತಿನಿಧಿಸಿದರು.

ಕೃಷ್ಣ ಅವರ ನಿಧನದಿಂದ ರಾಜ್ಯ ರಾಜಕೀಯದಲ್ಲಿ ದೊಡ್ಡ ಶೂನ್ಯವೊಂದು ಮೂಡಿದ್ದು, ಅವರ ಸಾಧನೆಗಳನ್ನು ಇಡೀ ದೇಶವೇ ಶ್ರದ್ಧೆಯಿಂದ ನೆನಸುತ್ತಿದೆ.

Related Post

Leave a Reply

Your email address will not be published. Required fields are marked *

error: Content is protected !!