ಆ ೦೪:-
“ದಸರಾ ಕಾರ್ಯಕ್ರಮವು ಒಂದು ನಾಡಹಬ್ಬ. ಇದು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕ ಪರಂಪರೆ ಮತ್ತು ಆಚರಣೆಗೆ ಸಂಬಂಧಿಸಿದ ಆಚರಣೆ. ಇಂತಹ ವೇದಿಕೆಯು ರಾಜಕೀಯ ಚರ್ಚೆಯ ವೇದಿಕೆಯಾಗಬಾರದು,” ಎಂದು ವಿಶ್ವನಾಥ್ ಅಭಿಪ್ರಾಯಪಟ್ಟರು. “ಸಾಹಿತಿ ಹಂಪ ನಾಗರಾಜಯ್ಯ ಅವರೇನು ದಸರಾ ಇತಿಹಾಸ, ಮಹಾರಾಜರ ಕೊಡುಗೆ, ಅಥವಾ ನಾಡಹಬ್ಬದ ಐತಿಹಾಸಿಕ ಮಹತ್ವದ ಬಗ್ಗೆ ಮಾತನಾಡದೇ, ರಾಜಕೀಯ ಭಾಷಣ ಮಾಡಿದ್ದಾರೆ” ಎಂದು ಅವರು ಖೇದ ವ್ಯಕ್ತಪಡಿಸಿದರು.
ಸಿದ್ದರಾಮಯ್ಯನಿಗೆ ಟಾಂಗ್:
ಹಿಂದೆ ಚಾಮುಂಡೇಶ್ವರಿ ದೇವಿಗೆ ಲಘುವಾಗಿ ಮಾತನಾಡುತ್ತಿದ್ದ ಸಿದ್ದರಾಮಯ್ಯ ಅವರು ಈಗ ತಾಯಿಯ ಆಶೀರ್ವಾದ ಬೇಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ ವಿಶ್ವನಾಥ್, “ನಾನೇನೂ ತಪ್ಪು ಮಾಡಿಲ್ಲ” ಎಂಬ ಸಿದ್ದರಾಮಯ್ಯನ ಹೇಳಿಕೆಯನ್ನು ಪ್ರಶ್ನಿಸಿದರು. “ಸಿದ್ದರಾಮಯ್ಯ ಅವರು ತಮ್ಮ ತಪ್ಪುಗಳನ್ನು ಒಪ್ಪಿಕೊಳ್ಳಬೇಕಾಗಿದ್ದು, ತಾಯಿ ಚಾಮುಂಡೇಶ್ವರಿಯ ಅಶೀರ್ವಾದ ಬೇಡುವುದು ರಾಜಕೀಯ ಲಾಭಕ್ಕಾಗಿ ಮಾತ್ರ” ಎಂದು ಅವರು ಕಿಡಿಕಾರಿದರು.
ಜಿಟಿಡಿ ಕುರಿತು ವಾಗ್ದಾಳಿ:
ಜಿಡಿ ದೇವೇಗೌಡರು ಸಿದ್ದರಾಮಯ್ಯ ಅವರನ್ನು ಹೊಗಳುತ್ತಿರುವುದು ಬೂಟಾಟಿಕೆ ತರದ ರೀತಿ ಎಂದು ಭಾವಿಸುತ್ತೇನೆ ಎಂದ ವಿಶ್ವನಾಥ್, “ಜೆಡಿಎಸ್ ಮಾಜಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನವನ್ನು ಕಳೆದುಕೊಂಡಿದ್ದು, ಅವರ ಕೋಪಕ್ಕೆ ಮತ್ತೊಂದು ಕಾರಣ” ಎಂದರು. ಮುಡಾ ಹಗರಣದ ಬಗ್ಗೆ ಇಷ್ಟು ದಿನ ಮೌನವಾಗಿದ್ದ ಜಿಟಿಡಿ ಈಗ ಏಕೆ ಬಾಯಿ ಬಿಟ್ಟಿದ್ದಾರೆ ಎಂಬ ಪ್ರಶ್ನೆವನ್ನು ವಿಶ್ವನಾಥ್ ಒತ್ತಿಹೇಳಿದರು.
“ಮೈಸೂರಿನಲ್ಲಿ ರಾಜಕೀಯ ನಾಯಕರು ಸೇರಿ ನಗರದ ಇಮೇಜ್ನ್ನು ಹಾಳು ಮಾಡುತ್ತಿದ್ದಾರೆ. ರಾಜಕಾರಣಿಗಳು ನಗರದ ಭವಿಷ್ಯವನ್ನು ಕೆಡಿಸುತ್ತಿದ್ದಾರೆ,” ಎಂದು ವಿಶ್ವನಾಥ್ ಕಿಡಿಕಾರಿದರು.
- ಯಾದಗಿರಿ ಎಸ್ಎಸ್ಎಲ್ಸಿ ಫಲಿತಾಂಶ ಮತ್ತೆ ಕೊನೆ ಸ್ಥಾನ: ಶಿಕ್ಷಕರಿಗೆ ನೋಟಿಸ್
- ಪತ್ನಿಯೇ ನದಿಗೆ ತಳ್ಳಿದ್ದಾಳೆಂದು ಆರೋಪಿಸಿದ್ದ ತಾತಪ್ಪನಿಗೆ ಮತ್ತೊಂದು ಶಾಕ್: ಬಾಲ್ಯವಿವಾಹ ಆರೋಪದಲ್ಲಿ ಸಂಕಷ್ಟ
- ಕೋಟ್ಯಾಂತರ ರೂ. ಖರ್ಚಾದರೂ ಕ್ರೀಡಾಂಗಣ ದರಿದ್ರಾವಸ್ಥೆ: ಯಾದಗಿರಿಯಲ್ಲಿ ಅನುದಾನ ಲೂಟಿ ಆರೋಪ!
- ಹೋನಗೇರಾ ಶಾಲೆಯ ದುಸ್ಥಿತಿ: ಶಿಥಿಲ ಕಟ್ಟಡ, ಸೌಲಭ್ಯಗಳ ಕೊರತೆ ನಡುವೆ ಜೀವ ಭಯದಲ್ಲಿ ನೂರಾರು ಮಕ್ಕಳ ಶಿಕ್ಷಣ
- ನದಿಗೆ ತಳ್ಳಿದ ಪ್ರಕರಣಕ್ಕೆ ಹೊಸ ತಿರುವು – ಪತಿ-ಪತ್ನಿ ಸಂಬಂಧಕ್ಕೆ ವಿಚ್ಛೇದನ ಅಂತ್ಯ