Mon. Jul 21st, 2025

ನವಕರ್ನಾಟಕ ನಿರ್ಮಾಣ ಕಾರ್ಮಿಕರ ಒಕ್ಕೂಟ, ಯಾದಗಿರಿ – ಗೋವಿಂದಪ್ಪ ವಡಗೇರಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ!

ನವಕರ್ನಾಟಕ ನಿರ್ಮಾಣ ಕಾರ್ಮಿಕರ ಒಕ್ಕೂಟ, ಯಾದಗಿರಿ – ಗೋವಿಂದಪ್ಪ ವಡಗೇರಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ!

ಯಾದಗಿರಿ, ಫೆಬ್ರವರಿ 10:

ನವಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಒಕ್ಕೂಟ(ರಿ) ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಗೋವಿಂದಪ್ಪ ವಡಗೇರಿ ಅವರನ್ನು ನೇಮಕ ಮಾಡಲಾಗಿದೆ.

ಈ ಸಂಬಂಧ ನಡೆದ ಸಭೆಯಲ್ಲಿ ಜಿಲ್ಲಾಧ್ಯಕ್ಷ ಹನುಮಂತ ಮೋಟನಳ್ಳಿ, ತಾಲೂಕು ಅಧ್ಯಕ್ಷ ಭೀಮರಾಯ ಹತ್ತಿಕುಣಿ ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಕಾರ್ಮಿಕರ ಹಿತಾಸಕ್ತಿಗಳನ್ನು ಮುಂದಿರಿಸಿ ವಿವಿಧ ನಿರ್ಧಾರಗಳನ್ನು ಕೈಗೊಳ್ಳಲಾಯಿತು.

ಪದಾಧಿಕಾರಿಗಳೆಲ್ಲರೂ ನೂತನ ಪ್ರಧಾನ ಕಾರ್ಯದರ್ಶಿಯ ನೇಮಕವನ್ನು ಹರ್ಷದಿಂದ ಸ್ವಾಗತಿಸಿ, ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಕಟ್ಟುನಿಟ್ಟಿನ ಕಾರ್ಯವೈಖರಿ ವಹಿಸುವಂತೆ ಆಶಯ ವ್ಯಕ್ತಪಡಿಸಿದರು.

ನೂತನ ಪ್ರಧಾನ ಕಾರ್ಯದರ್ಶಿ ಗೋವಿಂದಪ್ಪ ವಡಗೇರಿ, ತಮ್ಮ ಸೇವಾ ಅವಧಿಯಲ್ಲಿ ಕಾರ್ಮಿಕ ಕಲ್ಯಾಣ ಹಾಗೂ ಹಕ್ಕುಗಳ ಹೋರಾಟಕ್ಕೆ ಸಂಪೂರ್ಣ ತೊಡಗಿಕೊಳ್ಳುವ ನಿಶ್ಚಯ ವ್ಯಕ್ತಪಡಿಸಿದರು.

Whatsapp Group Join
facebook Group Join

Related Post

Leave a Reply

Your email address will not be published. Required fields are marked *

error: Content is protected !!