ಯಾದಗಿರಿ, ಸೆ ೨೩:- ಯಾದಗಿರಿ ಜಿಲ್ಲೆಯಲ್ಲಿ ಸಾಯಂಕಾಲ ಸಮಯದಲ್ಲಿ ಸುರಿದ ಮಳೆಯಿಂದ ತೀವ್ರ ಅನಾಹುತ ಸಂಭವಿಸಿದೆ. ಗುಡುಗು ಸಹಿತ ಬಿರುಗಾಳಿ ಮಳೆಯಿಂದಾಗಿ ಸಿಡಿಲು ಬಡಿದು ಮೂವರು ವ್ಯಕ್ತಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಯಾದಗಿರಿ ತಾಲೂಕಿನ ಜೀನಕೇರ ತಾಂಡದಲ್ಲಿ ನಡೆದಿದೆ. ಈ ದುರ್ಘಟನೆ ಸ್ಥಳೀಯರಲ್ಲಿ ತೀವ್ರ ದುಃಖವನ್ನುಂಟುಮಾಡಿದೆ.
ಸಾವಿನ ದುರ್ದೈವಿಗಳು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಈ ಅನಾಹುತ ಸಂಭವಿಸಿದೆ. ಸಾವನ್ನಪ್ಪಿದವರನ್ನು ಚೇನು (22), ಕಿಶನ್ (30), ಮತ್ತು ಸುಮಿಬಾಯಿ (30) ಎಂದು ಗುರುತಿಸಲಾಗಿದೆ. ಇನ್ನು, ಮೂವರು ತೀವ್ರವಾಗಿ ಗಾಯಗೊಂಡು ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
- 17ರ ಹರೆಯದಲ್ಲಿ 101 ಕೆಜಿ ಸಂಗ್ರಾಣಿ ಕಲ್ಲು ಎತ್ತಿ ಜಿಲ್ಲೆಯ ಕೀರ್ತಿ ತಂದ ಯುವ ಶಿಲ್ಪಿ
- ಆರು ತಿಂಗಳಿಂದ ಕಮಿಷನ್ ಬಾಕಿ — ನವೆಂಬರ್ ಪಡಿತರ ಎತ್ತುವಳಿ ನಿಲ್ಲಿಸಲು ವಿತರಕರ ಸಂಘದ ಎಚ್ಚರಿಕೆ
- ಯಾದಗಿರಿ ರೈತರಿಗೆ ಭಾರತ ಮಾಲಾ ಯೋಜನೆ ಬಾಧೆ — ಪರಿಹಾರ ಧನ ಹಾಗೂ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಡಾ. ಭೀಮಣ್ಣ ಮೇಟಿ ಆಗ್ರಹ
- ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ; ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮಲ್ಲಪ್ಪ ಸಂಕೀನ್ ನಾಮಪತ್ರ ಸಲ್ಲಿಕೆ
- ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯನಟ ರಾಜು ತಾಳಿಕೋಟಿ ಹೃದಯಾಘಾತದಿಂದ ನಿಧನ

