ಯಾದಗಿರಿ, ಸೆ ೨೩:- ಯಾದಗಿರಿ ಜಿಲ್ಲೆಯಲ್ಲಿ ಸಾಯಂಕಾಲ ಸಮಯದಲ್ಲಿ ಸುರಿದ ಮಳೆಯಿಂದ ತೀವ್ರ ಅನಾಹುತ ಸಂಭವಿಸಿದೆ. ಗುಡುಗು ಸಹಿತ ಬಿರುಗಾಳಿ ಮಳೆಯಿಂದಾಗಿ ಸಿಡಿಲು ಬಡಿದು ಮೂವರು ವ್ಯಕ್ತಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಯಾದಗಿರಿ ತಾಲೂಕಿನ ಜೀನಕೇರ ತಾಂಡದಲ್ಲಿ ನಡೆದಿದೆ. ಈ ದುರ್ಘಟನೆ ಸ್ಥಳೀಯರಲ್ಲಿ ತೀವ್ರ ದುಃಖವನ್ನುಂಟುಮಾಡಿದೆ.
ಸಾವಿನ ದುರ್ದೈವಿಗಳು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಈ ಅನಾಹುತ ಸಂಭವಿಸಿದೆ. ಸಾವನ್ನಪ್ಪಿದವರನ್ನು ಚೇನು (22), ಕಿಶನ್ (30), ಮತ್ತು ಸುಮಿಬಾಯಿ (30) ಎಂದು ಗುರುತಿಸಲಾಗಿದೆ. ಇನ್ನು, ಮೂವರು ತೀವ್ರವಾಗಿ ಗಾಯಗೊಂಡು ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
- ಮೀಸಲಾತಿ ಹಕ್ಕು, ದಾನವಲ್ಲ: ಕೇಂದ್ರ-ರಾಜ್ಯ ಸರ್ಕಾರಗಳಿಗೆ ಉಗ್ರಪ್ಪ ಎಚ್ಚರಿಕೆ
- ಮಲ್ಲಿಕಾರ್ಜುನ ಮುತ್ಯಾ ಪೋಕ್ಸೋ ಪ್ರಕರಣ: ಫೋಟೋ–ವಿಡಿಯೋ ಹಂಚಿದರೆ ಕಾನೂನು ಕ್ರಮ, ಎಸ್ಪಿ ಪೃಥ್ವಿಕ್ ಶಂಕರ್ ಎಚ್ಚರಿಕೆ
- ಮಾನವೀಯತೆಯ, ಒಂದೇ ನ್ಯಾಯದ,ವಿಶ್ವದ ಏಕೈಕ ಭಾರತೀಯ ಸಂವಿಧಾನ, ರಾಘವೇಂದ್ರ ಡಿ. ಅಭಿಮತ
- ದುರ್ಗಾದೇವಿ ದೇವಸ್ಥಾನದಲ್ಲಿ ೭೭ನೇ ಗಣರಾಜ್ಯೋತ್ಸವ ಆಚರಣೆ
- ಕನ್ಸಲ್ಟಿಂಗ್ ಸಿವಿಲ್ ಇಂಜೀನಿಯರ್ ಹಾಗೂ ಲಯನ್ಸ್ ಕ್ಲಬ್ ವತಿಯಿಂದ 77 ನೇ ಗಣರಾಜ್ಯೋತ್ಸವ ಆಚರಣೆ

