ಯಾದಗಿರಿ, ಸೆ ೨೪:-
ಈ ದುರ್ಘಟನೆಯ ಕುರಿತು ಯಾದಗಿರಿ ತಾಲ್ಲೂಕಿನ ಜಿನಕೇರಾ ತಾಂಡಕ್ಕೆ ಭೇಟಿ ನೀಡಿದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಶರಣಬಸಪ್ಪ ದರ್ಶನಾಪುರ, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿ, ಅವರ ನೋವನ್ನು ಹಂಚಿಕೊಂಡರು.
ಸಚಿವರು ಮಾತನಾಡುತ್ತ, “ಇಂತಹ ದುಃಖದ ಘಟನೆಗಳು ಮತ್ತೆ ನಡೆಯದಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ. ಕುಟುಂಬದ ಸದಸ್ಯರಿಗೆ ತಾತ್ಕಾಲಿಕ ಧನಸಹಾಯ ನೀಡಿದ್ದೇನೆ. ಸರ್ಕಾರದಿಂದಲೂ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇಂದು ಸಂಜೆ ಒಳಗಾಗಿ ಸರ್ಕಾರದಿಂದ ಘೋಷಿಸಲಾದ 5 ಲಕ್ಷ ರೂ. ಪರಿಹಾರ ಧನವನ್ನು ಮೃತರ ಕುಟುಂಬಗಳಿಗೆ ಜಮೆ ಮಾಡಲಾಗುವುದು” ಎಂದು ತಿಳಿಸಿದರು.
ಸಚಿವರೊಂದಿಗೆ ಜಿಲ್ಲಾ ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ., ತಹಶೀಲ್ದಾರ ಸುರೇಶ ಅಂಕಲಗಿ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ಹಾಗೂ ಇತರ ಪ್ರಮುಖ ಅಧಿಕಾರಿಗಳು ಸಂತ್ರಸ್ತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು.
ಸಚಿವರಿಂದ ಗಾಯಾಳುಗಳ ಆರೋಗ್ಯ ವಿಚಾರ:
ಸಿಡಿಲಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗಳನ್ನು ಸಚಿವರು ಆಸ್ಪತ್ರೆಗೆ ತೆರಳಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ವೈದ್ಯರಿಗೆ ತುರ್ತು ಮತ್ತು ಸಮರ್ಪಕ ಚಿಕಿತ್ಸೆ ನೀಡುವಂತೆ ಸೂಚಿಸಿದರು. “ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ, ಸರ್ಕಾರಿ ನೆರವಿನ ಬಗ್ಗೆ ಆರೋಗ್ಯ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು” ಎಂದು ಭರವಸೆ ನೀಡಿದರು.
ಈ ಘಟನೆ ಇಡೀ ಜಿನಕೇರಾ ತಾಂಡಕ್ಕೆ ಆಘಾತ ತಂದಿದ್ದು, ಗ್ರಾಮಸ್ಥರು ಸರ್ಕಾರದ ಕ್ರಮಗಳನ್ನು ನಿರೀಕ್ಷಿಸುತ್ತಿದ್ದಾರೆ. ಸ್ಥಳೀಯ ಶಾಸಕ, ಅಧಿಕಾರಿಗಳು, ಮತ್ತು ಜಿಲ್ಲಾ ಆಡಳಿತ ಕೂಡ ಇಂತಹ ಘಟನೆಗಳು ಮತ್ತೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.
ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
- ಯಾದಗಿರಿ ಎಸ್ಎಸ್ಎಲ್ಸಿ ಫಲಿತಾಂಶ ಮತ್ತೆ ಕೊನೆ ಸ್ಥಾನ: ಶಿಕ್ಷಕರಿಗೆ ನೋಟಿಸ್
- ಪತ್ನಿಯೇ ನದಿಗೆ ತಳ್ಳಿದ್ದಾಳೆಂದು ಆರೋಪಿಸಿದ್ದ ತಾತಪ್ಪನಿಗೆ ಮತ್ತೊಂದು ಶಾಕ್: ಬಾಲ್ಯವಿವಾಹ ಆರೋಪದಲ್ಲಿ ಸಂಕಷ್ಟ
- ಕೋಟ್ಯಾಂತರ ರೂ. ಖರ್ಚಾದರೂ ಕ್ರೀಡಾಂಗಣ ದರಿದ್ರಾವಸ್ಥೆ: ಯಾದಗಿರಿಯಲ್ಲಿ ಅನುದಾನ ಲೂಟಿ ಆರೋಪ!
- ಹೋನಗೇರಾ ಶಾಲೆಯ ದುಸ್ಥಿತಿ: ಶಿಥಿಲ ಕಟ್ಟಡ, ಸೌಲಭ್ಯಗಳ ಕೊರತೆ ನಡುವೆ ಜೀವ ಭಯದಲ್ಲಿ ನೂರಾರು ಮಕ್ಕಳ ಶಿಕ್ಷಣ
- ನದಿಗೆ ತಳ್ಳಿದ ಪ್ರಕರಣಕ್ಕೆ ಹೊಸ ತಿರುವು – ಪತಿ-ಪತ್ನಿ ಸಂಬಂಧಕ್ಕೆ ವಿಚ್ಛೇದನ ಅಂತ್ಯ